ಸೀನಪ್ಪನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿದ್ದ ಕುರಿ ಮೇಕೆ ಕಳವು ಪ್ರಕರಣ ದಾಖಲು!
ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೊಬಳಿ ವ್ಯಾಪ್ತಿಯ ಸೀನಪ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಗ್ರಾಮದ ಗಂಗಾಧರಯ್ಯ ಎಂಬುವವರಿಗೆ ಸೇರಿದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ತೋಟದ ಮನೆಯ ಬೀಗ ಮುರಿದು ನಾಲ್ಕು ಟಗರು ಹಾಗೂ ಒಂದು ಮೇಕೆ ಕಳವು ಮಾಡಲಾಗಿದೆ ಇದೆ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ
ಹಿಂದಷ್ಟೆ ಮನೆಯ ಮುಂದೆ ನಿಲ್ಲಿಸಲಾಗಿದ್ದ ಒಂದು ದ್ವಿಚಕ್ರ ವಾಹನ ಹಾಗೂ ದೇವಾಲಯದ ಬೀಗ ಮುರಿದು ಕಳವು ಮಾಡಲಾಗಿತ್ತು ಗ್ರಾಮದಲ್ಲಿ ದೇವಾಲಯ ಕಳವು ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಪ್ರಕರಣ ದಾಖಲಾಗಿದೆ ಗ್ರಾಮದಲ್ಲಿ ಇತ್ತಿಚೇಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇತ್ತಿಚೇಗೆ ಗ್ರಾಮೀಣ ಪ್ರದೇಶದಲ್ಲಿ ಕುರಿ ಮೇಕೆ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ಬೀಟ್ ಪೊಲೀಸ್ ವ್ಯವಸ್ಥೆ ಹೆಚ್ಚಿಸಿ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರ ಆಗ್ರಹವಾಗಿದೆ @publicnewskunigal