ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಶ್ರೀಮತಿ ಸಾವಿತ್ರಿಬಾಯಿ ಪುಲೆ ರವರ ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿ ಕೊಳ್ಳುವ ಮೂಲಕ ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆ ಯನ್ನು ನೀಡಬೇಕೆಂದು ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು!
ಕುಣಿಗಲ್ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಹಾಗೂ ಜಿಲ್ಲಾ ಸಮಿತಿ ಹಾಗೂ ತಾಲೂಕ ಸಮಿತಿ ವತಿಯಿಂದ ಶ್ರೀಮತಿ ಸಾವಿತ್ರಿಬಾಯಿ ಪುಲೆ ರವರ 195ನೇ ವರ್ಷದ ಜಯಂತಿಯ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾವಿತ್ರಿಬಾಯಿ ಪುಲೆ ರವರು ಹೂ ಮಾರಾಟ ಮಾಡುವ ಒಂದು ಸಣ್ಣ ಕುಟುಂಬದಲ್ಲಿ ಜನಿಸಿ ಮಹಿಳಾ ಸಮಾಜಕ್ಕೆ ಶಿಕ್ಷಣ ನೀಡಬೇಕು ಎಂಬ ಮಹತ್ವಕಾಂಕ್ಷೆಯನ್ನು ಹೊತ್ತು ಮಹಿಳೆಯರಿಗೆ ಶಿಕ್ಷಣ ನೀಡುವ ಸಂದರ್ಭದಲ್ಲಿ ಅನೇಕರು ಇವರ ಮೇಲೆ ಸಗಣಿ ಇನ್ನಿತರ ವಸ್ತುಗಳನ್ನು ಎಸೆದಿರುವ ಉದಾಹರಣೆಗಳು ಇವೆ, ಅದಕ್ಕೆಲ್ಲ ಜಗ್ಗದೆ ಸಾವಿತ್ರಿಬಾಯಿ ಫುಲೆರವರು ಅಂದಿನ ಕಾಲದ ಸಮಾಜದಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರನ್ನು ಕರೆದು ತಂದು ಶಿಕ್ಷಣವನ್ನ ನೀಡಿದ್ದು ತುಂಬಾ ಶ್ಲಾಘನೀಯ ಇವರ ಆದರ್ಶಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಮಾನವೀಯತೆ ಸಂಸ್ಕಾರ ಪಡೆದುಕೊಳ್ಳುವ ಮೂಲಕ ಉನ್ನತ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ತನ್ನದೇ ಆದಂತಹ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು. ಶಿಕ್ಷಕರು ಸಾವಿತ್ರಿಬಾಯಿ ಪುಲೆ ರವರ ಆದರ್ಶಗಳನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಆದರ್ಶ ಪ್ರಜೆಗಳನ್ನು ಸೃಷ್ಟಿ ಮಾಡುವ ಶಕ್ತಿ ತಮ್ಮ ಮೇಲಿದೆ ಪ್ರತಿಯೊಬ್ಬರು ವೇದಿಕೆಯ ಮೇಲೆ ಮಾತನಾಡುವುದು ಸುಲಭ ಅದನ್ನು ಅಳವಡಿಸಿಕೊಳ್ಳುವುದು ತುಂಬಾ ಅಪರೂಪ ಎಂದು ತಿಳಿಸಿದರು, ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಶಿಕ್ಷಕಿಯರನ್ನು ಗೌರವಿಸಿ ಅಭಿನಂದಿಸಲಾಯಿತು,ಈ ವೇಳೆ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಮಾರ್,ಚಿಂತಕ ಜಿ.ಕೆ ನಾಗಣ್ಣ,ಶಿವರಾಜು,ವೇದಿಕೆಯ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೆಲವು ಜನ ಪ್ರತಿನಿಧಿಗಳು, ಹಲವಾರು ಸಂಘಟನೆಗಳ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು,@publicnewskunigal