ರೈತ ದಿನಾಚರಣೆಯಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ರಜೆ ಘೋಷಣೆ ಮಾಡಿ ವಿಶ್ವ ರೈತ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕೆಂದು ರೈತ ಹಾಗೂ ರೈತಪರ್ವದ ಮುಖಂಡ ರಾಜ್ಯಧ್ಯಕ್ಷ ಅರುಣ್ ಕುಮಾರ್ ಆಗ್ರಹ!
ಕುಣಿಗಲ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ರಾಜ್ಯ ರೈತ ಸಂಘ ರೈತಪರ್ವ ಹಮ್ಮಿಕೊಂಡಿದ್ದ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ರೈತನ ಶ್ರಮ ಪ್ರಪಂಚಕ್ಕೆ ಗೊತ್ತಾಗುವ ರೀತಿಯಲ್ಲಿ ಸರ್ಕಾರಗಳು ರೈತ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದಾಗ ವರ್ಷವಿಡಿ ಕಷ್ಟಪಟ್ಟು ಬೆಳೆ ಬೆಳೆಯುವಂತ ರೈತನಿಗೂ ಸಂತೋಷ ಉಂಟಾಗುತ್ತದೆ ಪ್ರಪಂಚಕ್ಕೆ ಅನ್ನ ಕೊಡುವ ರೈತ ಕೈ ಕಟ್ಟಿ ಕುಳಿತರೆ ನಮ್ಮೆಲ್ಲರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಸರ್ಕಾರಗಳು ಅರ್ಥಮಾಡಿಕೊಳ್ಳಬೇಕು ರೈತನ ದಿನಾಚರಣೆಯಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಜೆ ಘೋಷಣೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ ದಿನಾಚರಣೆಯನ್ನು ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದ ಅವರು ರೈತ ಬೆಳೆದಂತಹ ಬೆಳೆಗಳಿಗೆ ಸರ್ಕಾರಗಳು ಸೂಕ್ತ ಬೆಂಬಲ ಬೆಲೆ ನೀಡಿದಾಗ ರೈತ ಸಮೃದ್ಧಿಯಿಂದ ಜೀವನ ನಡೆಸುತ್ತಾನೆ ಮತ್ತು ರೈತ ಕೃಷಿ ಮಾಡಲು ಅತಿ ಕಡಿಮೆ ಬೆಲೆಯಲ್ಲಿ ಸೂಕ್ತ ಕಾಲಕ್ಕೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವುದು, ಕೃಷಿ ಚಟುವಟಿಕೆ ಬೇಕಾಗುವ ಯಂತ್ರೋಪಕರಣಗಳು, ರಸಗೊಬ್ಬರಗಳನ್ನು ಸರ್ಕಾರಗಳು ವಿತರಣೆ ಮಾಡಬೇಕೆಂದು ಮನವಿ ಮಾಡಿದರು.ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಕಲ್ಯಾಣ ಮಂಟಪದವರೆಗೂ ರೈತರ ರ್ಯಾಲಿ ನಡೆಯಿತು. ತಾಲೂಕು ಸಂಘವನ್ನು ಅಭಿನಂದಿಸಿ ಗೌರವಿಸಲಾಯಿತು. ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಶುಗರ್ ಲಿಮಿಟೆಡ್ ಅಧ್ಯಕ್ಷರಾದ ಸಿಡಿ ಗಂಗಾಧರ್, ಹೈಕೋರ್ಟ್ ಖ್ಯಾತ ವಕೀಲರಾದ ನಾರಾಯಣಸ್ವಾಮಿ, ಮಾನವ ಹಕ್ಕುಗಳ ಅಧ್ಯಕ್ಷರಾದ ಇಂದ್ರಾಣಿ, ಕೆಲವು ರಾಜ್ಯ ಮಟ್ಟದ ಮುಖಂಡರು, ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಮಹಿಳಾ ಕಾರ್ಯದರ್ಶಿ ಸುಮತಿ, ಸಂಘದ ಜಿಲ್ಲಾಧ್ಯಕ್ಷರಾದ ಬಿ ಎಲ್ ಮಂಜುನಾಥ್ (ಮುನಿಯಪ್ಪ ) ಪ್ರಚಾರ ಸಮಿತಿ ಅಧ್ಯಕ್ಷರಾದ ಸತೀಶ್, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಇರ್ಫಾನ್, ಸಂಘದ ರಾಜ್ಯ ಉಪಾಧ್ಯಕ್ಷ ವಿಜಯ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ತಾಲೂಕು ಅಧ್ಯಕ್ಷ ಪುರುಷೋತ್ತಮ್ (ಬಂಗ್ಲೆ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣ ಗೌಡ, ಒಳಗೊಂಡಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ರೈತರು ಉಪಸ್ಥಿತರಿದ್ದರು.@publicnewskunigal